September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಯವರು ಅ.2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.6 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!