September 6, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು.

ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣಕ್ಕಾಗಿ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ವೈಯಕ್ತಿಕವಾಗಿ ಸಹಾಯ ಧನವನ್ನು ನೀಡಿ ಹರೀಶ್ ವಿ. ರವರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿ‌‌ಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya
error: Content is protected !!