ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು.ಕಿರಣ್ ಚಂದ್ರ ಡಿ ಪುಷ್ಪಗಿರಿರವರ ನೇತೃತ್ವದಲ್ಲಿ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕಿರಣ್ ಚಂದ್ರ ರವರ ಸಲಹೆ ಮೇರೆಗೆ ಮನೆ ಪುನರ್ ನಿರ್ಮಾಣ ಕಾರ್ಯಕ್ಕೆ ರೂ.25 ಸಾವಿರ ಧನ ಸಹಾಯ ಮಾಡಿದರು.

ಈ ಸಂದಭದಲ್ಲಿ ಮಾತನಾಡಿದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಮನೆಯ ದುರಸ್ತಿ ಕಾರ್ಯಕ್ಕೆ ಇನ್ನಷ್ಟು, ಆರ್ಥಿಕವಾಗಿ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಾಬು ಗೌಡ ನೆರಿಯ, ತೋಟತ್ತಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಓಬಯ್ಯ ಗೌಡ ಚಿಬಿದ್ರೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಭರತ್ ಹಾಗೂ ಊರಿನ ಹಲವಾರು ಗಣ್ಯರು ಉಪಸ್ಥಿತರಿದ್ದರು.











