September 6, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!