22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya
error: Content is protected !!