25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

ಬೆಳ್ತಂಗಡಿ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering Zagreb Indices and Posets of a Graph using Mixed Degree Conditions” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾನಿಲಯವು ಅ.6 ರಂದು ಪಿ.ಎಚ್.ಡಿ. ಪದವಿ ಪ್ರದಾನ ಮಾಡಿದೆ.

ಈ ಸಂಶೋಧನಾ ಕಾರ್ಯಕ್ಕೆ ಡಾ. ಸಾಯಿನಾಥ್ ಉಡುಪ ಎನ್.ವಿ. ಹಾಗೂ ಡಾ. ಪೃಥ್ವಿರಾಜ್ ಎಂ. ಇವರು ಮಾರ್ಗದರ್ಶನ ನೀಡಿದ್ದರು.

ಇವರು ಪಿಲ್ಯ ಗ್ರಾಮ, ಬರಾಯದ ಲಕ್ಷ್ಮಣ ಪೂಜಾರಿ ಮತ್ತು ಲೀಲಾವತಿ ದಂಪತಿಯ ಪುತ್ರಿಯಾಗಿದ್ದು, ಅಳದಂಗಡಿಯ ಸಿವಿಲ್ ಇಂಜಿನಿಯರ್ ಪ್ರಸಾದ್ ಪೂಜಾರಿ ಇವರ ಪತ್ನಿಯಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಸೂಳಬೆಟ್ಟು ಮತ್ತು ಬಡಗಕಾರಂದೂರು ಶಾಲೆಗಳಲ್ಲಿ ಮುಗಿಸಿರುವ ಇವರು, ಎಸ್.ಡಿ.ಎಮ್ ಕಾಲೇಜು, ಉಜಿರೆಯಲ್ಲಿ ಬಿಎಸ್ಸಿ ಹಾಗೂ ಸಂತ ಫಿಲೋಮಿನಾ ಕಾಲೇಜು, ಪುತ್ತೂರು ಇಲ್ಲಿ ಎಂಎಸ್ಸಿ ಗಣಿತಶಾಸ್ತ್ರ ಪದವಿ ಪಡೆದಿದ್ದಾರೆ.

ಇವರು 2018ರಲ್ಲಿ ಕೆ -ಸೆಟ್ (K-SET) ಹಾಗು 2021ರಲ್ಲಿ ನಡೆದ ಕರ್ನಾಟಕ ಸರ್ಕಾರದ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!