23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.
ಅವರು ಕರಂಬಾರು ಜ್ಞಾನೇಶ್ವರಿ ಭಜನಾ‌ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ‌ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಾl ಹೆಡಗೇವಾರರ ಸಂಕಲ್ಪ ಶಕ್ತಿ ಅದ್ಭುತವಾದದ್ದು. ಸಂಘದ ಸ್ಥಾಪನೆಯಿಂದ ಹಿಂದುತ್ವಕ್ಕೆ ಬಲ ಬಂದಿದೆ. ವಿಶ್ವಗುರು ಆಗಲು ನಮ್ಮ ಸಮಾಜಕ್ಕೆ ಸಾಧ್ಯ. ದೇಶ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದರು.
ಸಂಘದ ಜಿಲ್ಲಾ ಸಹಕಾರ್ಯವಾಹಕ ಸುಜಿತ್ ಕುಂಡಡ್ಕ ಬೌದ್ಧಿಕ್ ಮಾಡಿ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಕುಟುಂಬ ನೀತಿಯ ಪಾಲನೆ, ನಾಗರಿಕ ಶಿಷ್ಟಾಚಾರ, ಸ್ವದೇಶಿ ವಸ್ತುಗಳ ಉಪಯೋಗದಂತಹ ಪಂಚಪರಿವರ್ತನೆಗೆ ನಾವೆಲ್ಲ ಮುಂದಡಿಯಿಡಬೇಕು ಎಂದರು.

ಸಂಘ ಶತಾಬ್ದಿಯ ಹಿನ್ನಲೆಯಲ್ಲಿ ಬಳಂಜ ಮಂಡಲದ ತೆಂಕಕಾರಂದೂರು, ಕರಂಬಾರು, ಶಿರ್ಲಾಲು, ನಾಲ್ಕೂರು, ಬಳಂಜ ಗ್ರಾಮದ ನೂರೈವತ್ತಕ್ಕೂ ಹೆಚ್ಚು ಸ್ವಯಂಸೇವಕರು ಗಣವೇಶಧಾರಿಗಳಾಗಿ ಭಾಗವಹಿಸಿದ್ದರು.

Related posts

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!