September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya
error: Content is protected !!