July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಯವರು ಅ.2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.6 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya
error: Content is protected !!