September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ.

ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು. ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಹೆಗ್ಡೆ ಅವರು ಈ ಯೋಜನೆಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Related posts

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya
error: Content is protected !!