ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇನೋವೇಷನ್ಸ್ ಇನ್ ಕೆಮಿಸ್ಟ್ರಿ ಮೆಟೀರಿಯಲ್ಸ್ ಆ್ಯಂಡ್ ಮೆಡಿಸಿನ್ಸ್ ಫಾರ್ ಸಸ್ಟೇನೇಬಲ್ ಸೊಸೈಟಿ ಶೀರ್ಷಿಕೆಯಡಿ ಅಂತರಾಷ್ಟೀಯ ವಿಚಾರ ಸಂಕಿರಣವನ್ನು ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಇಂದ್ರಪ್ರಸ್ಥ ಸಭಾಂಗಣದಲ್ಲಿ ಅ.8 ರಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭೌತಿಕ ವಸ್ತು-ಉತ್ಪನ್ನ-ಔಷಧೀಯ ನೆಲೆಗಳನ್ನು ಆಧರಿಸಿ ರಸಾಯನಶಾಸ್ತ್ರ ಶೈಕ್ಷಣಿಕ ವಲಯದಲ್ಲಿ ನಡೆಯುವ ಸಂಶೋಧನೆಯ ಹೆಜ್ಜೆಗಳು ಸುಸ್ಥಿರ ಸಮಾಜ ನಿರ್ಮಾಣದೊಂದಿಗಿರಬೇಕು ಎಂಬ ಕೇಂದ್ರ ಆಶಯದೊಂದಿಗೆ ಈ ವಿಚಾರ ಸಂಕಿರಣ ಆಯೋಜಿತವಾಗುತ್ತಿದೆ ಎಂದರು.

ಜರ್ಮನಿಯ ಇನ್ಸಿಟ್ಯೂಟ್ ಆಫ್ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲೈಬ್ನಿಜ್‌ನ ಸಂಶೋಧಕ ಉಲ್ರಿಶ್ ಕೆ ರೊಝಲರ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಅಂತರಾಷ್ಟ್ರೀಯ ವಿಚಾರ ಸಂಕೀರಣದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಶಿವರಾಮ ಹೊಳ್ಳ, ತಮಿಳುನಾಡಿನ ಕರೈಕುಡಿಯ ಸೆಚಿಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸಿಟ್ಯೂಟ್‌ನ ನಿರ್ದೇಶಕ ಡಾ.ರಮೇಶ್ ಕೆ, ಗೋವಾದ ಸಿಂಗೇಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಭಾನು ಮಂಜುನಾಥ್ ನಾರಾಯಣ್ ಉಪಸ್ಥಿತರಿದ್ದರು.

ವೈಷ್ಣವಿ ಮತ್ತು ತಂಡದವರು ಪ್ರಾರ್ಥನೆಗೈದರು,ಡೀನ್ ಡಾ.ಸೌಮ್ಯ ಸ್ವಾಗತಿಸಿದರು. ಡಾ.ನೆಪಿಶತ್ ನಿರೂಪಿಸಿದರು. ಡಾ.ಶಶಿಪ್ರಭಾ ವಂದಿಸಿದರು.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya
error: Content is protected !!