July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇನೋವೇಷನ್ಸ್ ಇನ್ ಕೆಮಿಸ್ಟ್ರಿ ಮೆಟೀರಿಯಲ್ಸ್ ಆ್ಯಂಡ್ ಮೆಡಿಸಿನ್ಸ್ ಫಾರ್ ಸಸ್ಟೇನೇಬಲ್ ಸೊಸೈಟಿ ಶೀರ್ಷಿಕೆಯಡಿ ಅಂತರಾಷ್ಟೀಯ ವಿಚಾರ ಸಂಕಿರಣವನ್ನು ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಇಂದ್ರಪ್ರಸ್ಥ ಸಭಾಂಗಣದಲ್ಲಿ ಅ.8 ರಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭೌತಿಕ ವಸ್ತು-ಉತ್ಪನ್ನ-ಔಷಧೀಯ ನೆಲೆಗಳನ್ನು ಆಧರಿಸಿ ರಸಾಯನಶಾಸ್ತ್ರ ಶೈಕ್ಷಣಿಕ ವಲಯದಲ್ಲಿ ನಡೆಯುವ ಸಂಶೋಧನೆಯ ಹೆಜ್ಜೆಗಳು ಸುಸ್ಥಿರ ಸಮಾಜ ನಿರ್ಮಾಣದೊಂದಿಗಿರಬೇಕು ಎಂಬ ಕೇಂದ್ರ ಆಶಯದೊಂದಿಗೆ ಈ ವಿಚಾರ ಸಂಕಿರಣ ಆಯೋಜಿತವಾಗುತ್ತಿದೆ ಎಂದರು.

ಜರ್ಮನಿಯ ಇನ್ಸಿಟ್ಯೂಟ್ ಆಫ್ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲೈಬ್ನಿಜ್‌ನ ಸಂಶೋಧಕ ಉಲ್ರಿಶ್ ಕೆ ರೊಝಲರ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಅಂತರಾಷ್ಟ್ರೀಯ ವಿಚಾರ ಸಂಕೀರಣದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಶಿವರಾಮ ಹೊಳ್ಳ, ತಮಿಳುನಾಡಿನ ಕರೈಕುಡಿಯ ಸೆಚಿಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸಿಟ್ಯೂಟ್‌ನ ನಿರ್ದೇಶಕ ಡಾ.ರಮೇಶ್ ಕೆ, ಗೋವಾದ ಸಿಂಗೇಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಭಾನು ಮಂಜುನಾಥ್ ನಾರಾಯಣ್ ಉಪಸ್ಥಿತರಿದ್ದರು.

ವೈಷ್ಣವಿ ಮತ್ತು ತಂಡದವರು ಪ್ರಾರ್ಥನೆಗೈದರು,ಡೀನ್ ಡಾ.ಸೌಮ್ಯ ಸ್ವಾಗತಿಸಿದರು. ಡಾ.ನೆಪಿಶತ್ ನಿರೂಪಿಸಿದರು. ಡಾ.ಶಶಿಪ್ರಭಾ ವಂದಿಸಿದರು.

Related posts

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!