September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಇಂದು(ಅ.8) ಗೌಡರ ಯಾನೆ ಒಕ್ಕಲಿಗರ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಹಾಗೂ ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ಯುವ ವೇದಿಕೆ ವತಿಯಿಂದ ಮನೆಗೆ ಮುಂದಿನ 2 ತಿಂಗಳಿಗೆ ಬೇಕಾದ ದಿನಸಿ ಸಾಮಾಗ್ರಿ, ಅಕ್ಕಿ ನೀಡಲಾಯಿತು ಹಾಗೂ ಮನೆ ನಿರ್ಮಾಣಕ್ಕೆ ಆರ್ಥಿಕವಾಗಿ ಸಹಾಯ ನೀಡುವ ಭರವಸೆ ನೀಡಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು ವಿಷ್ಣು ಪ್ರಸಾದ್ , ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ , ಶಿಕ್ಷಕರು ಹಾಗೂ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಧರ್ಣಪ್ಪ ಗೌಡ, ಕೋಶಾಧಿಕಾರಿ ಯುವರಾಜ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್, ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ್, ಕಾರ್ಯದರ್ಶಿ ಸುರೇಶ್ ಗೌಡ, ನವೀನ್ ಗೌಡ, ನಿತಿನ್, ಪ್ರದೀಪ್ ಗೌಡ, ತಿಕ್ಷಿತ್ , ಭರತ್, ದಿನೇಶ್, ಪ್ರಸಾದ್ ಹಾಗೂ ಮಹಿಳಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!