25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇನೋವೇಷನ್ಸ್ ಇನ್ ಕೆಮಿಸ್ಟ್ರಿ ಮೆಟೀರಿಯಲ್ಸ್ ಆ್ಯಂಡ್ ಮೆಡಿಸಿನ್ಸ್ ಫಾರ್ ಸಸ್ಟೇನೇಬಲ್ ಸೊಸೈಟಿ ಶೀರ್ಷಿಕೆಯಡಿ ಅಂತರಾಷ್ಟೀಯ ವಿಚಾರ ಸಂಕಿರಣವನ್ನು ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಇಂದ್ರಪ್ರಸ್ಥ ಸಭಾಂಗಣದಲ್ಲಿ ಅ.8 ರಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭೌತಿಕ ವಸ್ತು-ಉತ್ಪನ್ನ-ಔಷಧೀಯ ನೆಲೆಗಳನ್ನು ಆಧರಿಸಿ ರಸಾಯನಶಾಸ್ತ್ರ ಶೈಕ್ಷಣಿಕ ವಲಯದಲ್ಲಿ ನಡೆಯುವ ಸಂಶೋಧನೆಯ ಹೆಜ್ಜೆಗಳು ಸುಸ್ಥಿರ ಸಮಾಜ ನಿರ್ಮಾಣದೊಂದಿಗಿರಬೇಕು ಎಂಬ ಕೇಂದ್ರ ಆಶಯದೊಂದಿಗೆ ಈ ವಿಚಾರ ಸಂಕಿರಣ ಆಯೋಜಿತವಾಗುತ್ತಿದೆ ಎಂದರು.

ಜರ್ಮನಿಯ ಇನ್ಸಿಟ್ಯೂಟ್ ಆಫ್ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲೈಬ್ನಿಜ್‌ನ ಸಂಶೋಧಕ ಉಲ್ರಿಶ್ ಕೆ ರೊಝಲರ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಅಂತರಾಷ್ಟ್ರೀಯ ವಿಚಾರ ಸಂಕೀರಣದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಶಿವರಾಮ ಹೊಳ್ಳ, ತಮಿಳುನಾಡಿನ ಕರೈಕುಡಿಯ ಸೆಚಿಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸಿಟ್ಯೂಟ್‌ನ ನಿರ್ದೇಶಕ ಡಾ.ರಮೇಶ್ ಕೆ, ಗೋವಾದ ಸಿಂಗೇಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಭಾನು ಮಂಜುನಾಥ್ ನಾರಾಯಣ್ ಉಪಸ್ಥಿತರಿದ್ದರು.

ವೈಷ್ಣವಿ ಮತ್ತು ತಂಡದವರು ಪ್ರಾರ್ಥನೆಗೈದರು,ಡೀನ್ ಡಾ.ಸೌಮ್ಯ ಸ್ವಾಗತಿಸಿದರು. ಡಾ.ನೆಪಿಶತ್ ನಿರೂಪಿಸಿದರು. ಡಾ.ಶಶಿಪ್ರಭಾ ವಂದಿಸಿದರು.

Related posts

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya
error: Content is protected !!