ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇನೋವೇಷನ್ಸ್ ಇನ್ ಕೆಮಿಸ್ಟ್ರಿ ಮೆಟೀರಿಯಲ್ಸ್ ಆ್ಯಂಡ್ ಮೆಡಿಸಿನ್ಸ್ ಫಾರ್ ಸಸ್ಟೇನೇಬಲ್ ಸೊಸೈಟಿ ಶೀರ್ಷಿಕೆಯಡಿ ಅಂತರಾಷ್ಟೀಯ ವಿಚಾರ ಸಂಕಿರಣವನ್ನು ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಇಂದ್ರಪ್ರಸ್ಥ ಸಭಾಂಗಣದಲ್ಲಿ ಅ.8 ರಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭೌತಿಕ ವಸ್ತು-ಉತ್ಪನ್ನ-ಔಷಧೀಯ ನೆಲೆಗಳನ್ನು ಆಧರಿಸಿ ರಸಾಯನಶಾಸ್ತ್ರ ಶೈಕ್ಷಣಿಕ ವಲಯದಲ್ಲಿ ನಡೆಯುವ ಸಂಶೋಧನೆಯ ಹೆಜ್ಜೆಗಳು ಸುಸ್ಥಿರ ಸಮಾಜ ನಿರ್ಮಾಣದೊಂದಿಗಿರಬೇಕು ಎಂಬ ಕೇಂದ್ರ ಆಶಯದೊಂದಿಗೆ ಈ ವಿಚಾರ ಸಂಕಿರಣ ಆಯೋಜಿತವಾಗುತ್ತಿದೆ ಎಂದರು.

ಜರ್ಮನಿಯ ಇನ್ಸಿಟ್ಯೂಟ್ ಆಫ್ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲೈಬ್ನಿಜ್‌ನ ಸಂಶೋಧಕ ಉಲ್ರಿಶ್ ಕೆ ರೊಝಲರ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಅಂತರಾಷ್ಟ್ರೀಯ ವಿಚಾರ ಸಂಕೀರಣದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಶಿವರಾಮ ಹೊಳ್ಳ, ತಮಿಳುನಾಡಿನ ಕರೈಕುಡಿಯ ಸೆಚಿಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸಿಟ್ಯೂಟ್‌ನ ನಿರ್ದೇಶಕ ಡಾ.ರಮೇಶ್ ಕೆ, ಗೋವಾದ ಸಿಂಗೇಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಭಾನು ಮಂಜುನಾಥ್ ನಾರಾಯಣ್ ಉಪಸ್ಥಿತರಿದ್ದರು.

ವೈಷ್ಣವಿ ಮತ್ತು ತಂಡದವರು ಪ್ರಾರ್ಥನೆಗೈದರು,ಡೀನ್ ಡಾ.ಸೌಮ್ಯ ಸ್ವಾಗತಿಸಿದರು. ಡಾ.ನೆಪಿಶತ್ ನಿರೂಪಿಸಿದರು. ಡಾ.ಶಶಿಪ್ರಭಾ ವಂದಿಸಿದರು.

Related posts

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!