September 6, 2026
ನಿಧನ

ನಾರಾವಿ: ಹೊಸಮನೆಯ ಜಿನರಾಜ ಪೂವಣಿ ನಿಧನ

ನಾರಾವಿ: ಇಲ್ಲಿಯ ಹೊಸಮನೆಯ ಹಿರಿಯರು ಹಾಗೂ ಆದರ್ಶ ಮತ್ತು ಸುಸಂಸ್ಕೃತ ನಡವಳಿಕೆಯ ಸ್ನೇಹಪರ ವ್ಯಕ್ತಿತ್ವದ ಜಿನರಾಜ ಪೂವಣಿಯವರು(91ವ) ಮಂಗಳವಾರ ಸಂಜೆ ನಿಧನರಾದರು.

ಮದುವೆಯಾಗಿ ಕೆಲವೇ ಕೆಲವು ವರ್ಷಗಳಲ್ಲಿ ಪತ್ನಿಯನ್ನು ಕಳೆದುಕೊಂಡರಾದರೂ, ಮರು ವಿವಾಹಕ್ಕೆ ಎಷ್ಟೇ ಒತ್ತಡವಿದ್ದರೂ ತನ್ನ ಪುಟ್ಟ ನಾಲ್ಕು ಮಕ್ಜಳ‌ ಭವಿಷ್ಯಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಂಡ ತ್ಯಾಗಮಯಿ ಎನಿಸಿಕೊಂಡವರು. ಎಳೆಯ ಮಕ್ಕಳನ್ನು ಬಿಟ್ಟು ಉದ್ಯೋಗಕ್ಕೆ ಹೋಗುವುದು ಕಷ್ಟ ಎಂಬುದನ್ನರಿತು ಸಣ್ಣದಾದ ಹೋಟೆಲ್ ನಡೆಸುತ್ತಾ ನಾಲ್ಕು ಮಕ್ಕಳಿಗೂ ತಾಯಿ ಇಲ್ಲ ಎನ್ನುವ ಕೊರಗು ಒಂದು ದಿನವೂ ಬರದಂತೆ ಸಾಕಿ ಸಲಹಿದ ಪರಿಯಂತೂ ಅವರ ಪ್ರಾಂಜಲ ಗುಣಮನಸ್ಸಿಗೆ ಪ್ರತಿಬಿಂಬವಾಗಿದೆ. ಬಡತನ ಬೇಗೆಯ ನಡುವೆಯು ಪತ್ನಿ ಕಳೆದುಕೊಂಡ ಸಂಕಟದಲ್ಲಿಯೂ ಕಷ್ಟವೆಲ್ಲಾ ನನಗಿರಲಿ ಎಂದು ಕಷ್ಟವನ್ನೆಲ್ಲ ಮನದಲ್ಲೆ ನುಂಗಿಕೊಂಡು ಜೀವನ ನಡೆಸಿದ ಪುಣ್ಯಯೋಗಿ ಜಿನರಾಜ ಪೂವಣಿಯವರು‌.

ತಾನು ಹಸಿದುಕೊಂಡಿದ್ದರೂ, ಇನ್ನೊಬ್ಬರ ಸಂಕಷ್ಟಕ್ಕೆ ಸದಾ ಮಿಡಿಯುತ್ತಿದ್ದ ಅವರ ನಿಸ್ವಾರ್ಥ ಮನಸ್ಸು ಮತ್ತು ಗುಣಸ್ವಭಾವ ಅನುಕರಣೀಯ ಮತ್ತು ಅಭಿನಂದನೀಯ.

ಮೂವರು ಸುಪುತ್ರಿಯರು , ಓರ್ವ ಪುತ್ರ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧುಬಳಗವನ್ನು ಅಗಲಿದ್ದಾರೆ.

Related posts

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya
error: Content is protected !!