23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಇಂದು(ಅ.8) ಗೌಡರ ಯಾನೆ ಒಕ್ಕಲಿಗರ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಹಾಗೂ ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ಯುವ ವೇದಿಕೆ ವತಿಯಿಂದ ಮನೆಗೆ ಮುಂದಿನ 2 ತಿಂಗಳಿಗೆ ಬೇಕಾದ ದಿನಸಿ ಸಾಮಾಗ್ರಿ, ಅಕ್ಕಿ ನೀಡಲಾಯಿತು ಹಾಗೂ ಮನೆ ನಿರ್ಮಾಣಕ್ಕೆ ಆರ್ಥಿಕವಾಗಿ ಸಹಾಯ ನೀಡುವ ಭರವಸೆ ನೀಡಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು ವಿಷ್ಣು ಪ್ರಸಾದ್ , ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ , ಶಿಕ್ಷಕರು ಹಾಗೂ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಧರ್ಣಪ್ಪ ಗೌಡ, ಕೋಶಾಧಿಕಾರಿ ಯುವರಾಜ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್, ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ್, ಕಾರ್ಯದರ್ಶಿ ಸುರೇಶ್ ಗೌಡ, ನವೀನ್ ಗೌಡ, ನಿತಿನ್, ಪ್ರದೀಪ್ ಗೌಡ, ತಿಕ್ಷಿತ್ , ಭರತ್, ದಿನೇಶ್, ಪ್ರಸಾದ್ ಹಾಗೂ ಮಹಿಳಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!