23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!