ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya
error: Content is protected !!