March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya
error: Content is protected !!