ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya
error: Content is protected !!