23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಮತ್ತು ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ ಬೆಳ್ತಂಗಡಿ ತಾಲೂಕು, ದ.ಕ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಅ.10ರಿಂದ 11ರವರೆಗೆ ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ.10ರಂದು ಸಂಜೆ 4 ಗಂಟೆಗೆ ಕರ್ನಾಟಕ ಸರಕಾರದ ಸಭಾಧ್ಯಕ್ಷ ಯು.ಟಿ. ಖಾದರ್ ಪರಿದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್. ಬಂಗಾರಪ್ಪ ಗೌರವ ಉಪಸ್ಥಿತರಿರುವರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಅನೇಕ ಗಣ್ಯ ಅತಿಥಿಗಳು ಭಾಗವಹಿಸಲಿರುವರು, 8 ಜಿಲ್ಲೆಗಳಿಂದ ಒಟ್ಟು 32 ತಂಡಗಳು 600 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಪಂದ್ಯಾಟ ಸಂಜೆ 6 ಗಂಟೆಗೆ ಹೊನಲು ಬೆಳಕಿನಲ್ಲಿ ಪ್ರಾರಂಭವಾಗಲಿದೆ ಇದರೊಂದಿಗೆ ತಾಲೂಕಿನ ಹಾಗೂ ಜಿಲ್ಲೆಯ 150 ಮಂದಿ ಕ್ರೀಡಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮುಂಡಾಜೆಯ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ ಎಂ.ಎಸ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!