26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!