July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!