23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ ಅ.7 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದ್ವೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಅಭ್ಯಾಸ್ ಪಿ .ಯು ಕಾಲೇಜಿನ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಉಪ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಕಾರ್ಯಕ್ರಮದ ಕುರಿತು ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರಾಮಾಯಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಕಾರ್ತಿಕೇಯ ಎಂ.ಎಸ್ ಅವರು ಇಂಥಹ ಮೌಲ್ಯದಾಯಕ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿ ಅನಿವಾರ್ಯವಾಗಿದ್ದು ಮುಂದಿನ ದಿನಗಳಲ್ಲಿ ಕೂಡ ಇಂಥಹ ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕ ಸುಧೀರ್ ಸ್ವಾಗತಿಸಿ, ನಿರೂಪಿಸಿದರು. ನಿಲಯ ಪಾಲಕರಾದ ಜೀತೇಶ್ ವಂದಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya
error: Content is protected !!