37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

ಬೆಳ್ತಂಗಡಿ: ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ ಅವುಗಳ‌ ಅಭಿವೃದ್ದಿಯನ್ನು ಜೈನ ಸಮಾಜವೇ ಮಾಡುತ್ತಾ ಬಂದಿದ್ದು ಅಲ್ಲಿ ಧಾರ್ಮಿಕ ವಿಧಿವಿಧಾನಗಳು ನಿತ್ಯ ನಡೆಯುತ್ತಿದೆ ಈ ಬಸದಿಗಳನ್ನು ಆರಕ್ಷಿತ ಸ್ಮಾರಕ ಎಂದು ಘೋಷಿಸುವುದರಿಂದಾಗಿ ಇಲ್ಲಿನ ಎಲ್ಲ ಕಾರ್ಯಗಳಿಗೆ ಅಡಚಣೆಯುಂಟಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಈ ಬಸದಿಗಳನ್ನು ಆರಕ್ಷಿತ ಸ್ಮಾರಕ ಎಂದು ಘೋಷಿಸುವುದನ್ನು ಕೈಬಿಡಬೇಕು ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜಿಲ್ಲಾಧಿಕಾರಿ ರವರಿಗೆ ಆಕ್ಷೇಪನ ಸಲ್ಲಿಸಿದ್ದಾರೆ.

ಈ ಬಗ್ಗೆ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಜೈನ್ ಸಮುದಾಯದ ಮುಖಂಡರುಗಳು ಮನವಿ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕಿನ ಬಂಗಾಡಿ ಶ್ರೀ ಶಾಂತಿನಾಥ ಬಸದಿ, ಬೈಪಾಡಿ ಶ್ರೀ ಶಾಂತಿನಾಥ ಬಸದಿ, ಅಳದಂಗಡಿ ಶ್ರೀ ಪಾರ್ಶ್ವನಾಥ ಬಸದಿ, ಬಂಗಾಡಿ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಬೈಲಂಗಡಿ ಶ್ರೀ ಪಾರ್ಶ್ವನಾಥ ಬಸದಿ, ಶಿಶಿಲ ಚಂದ್ರನಾಥ ಬಸದಿಯನ್ನು ಅರಕ್ಷಿತ ಸ್ಮಾರಕಗಳು ಎಂದು ಗುರುತಿಸಿದೆ.

ಈಗ ಆರಕ್ಷಿತ ಸ್ಮಾರಕಗಳೆಂದು ಗುರುತಿಸಲಾಗಿರುವ ಬಸದಿಗಳು ಸದ್ಯ ಸುಸ್ಥಿತಿಯಲ್ಲಿದ್ದು ಪೂಜೆ ಪುರಸ್ಕಾರಗಳು, ಧಾರ್ಮಿಕ ವಿಧಿವಿಧಾನಗಳ, ಸಂಪ್ರದಾಯಿಕ ಆರಾಧನೆಗಳು ಇಲ್ಲಿ ನಿರಂತರ ನಡೆಯುತ್ತಿದೆ.
ಏಕಾಏಕಿ ಸದ್ರಿ ಬಸದಿಗಳನ್ನು ಆರಕ್ಷಿತ ಸ್ಮಾರಕ ಎಂದು ಘೋಷಿಸುವುದರಿಂದ ಸದ್ರಿ ಬಸದಿಗಳಿಗೆ ಒಳಪಟ್ಟ ಜೈನ ಧರ್ಮೀಯರಿಗೆ ತಮ್ಮ ಆಚರಣೆಗಳನ್ನು ನಡೆಸಲು ಅಡಚಣೆಯುಂಟಾಗುತ್ತದೆ. ಕಾಯ್ದೆಯ ನಿಬಂಧನೆಗಳಿಂದ ಪ್ರತಿನಿತ್ಯದ ಕಾರ್ಯಗಳಿಗೂ ತೊಂದರೆಯಾಗುತ್ತದೆ. ಅಲ್ಲದೆ ಸಮಾಜದವರಿಗೆ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಇದರಿಂದಾಗಿ ಸಿಸ್ಥಿತಿಯಲ್ಲಿರುವ ಈ ಬಸದಿಗಳು ಅಜೀರ್ಣಗೊಳ್ಳುವ ಸಾಧ್ಯತೆಗಳೂ ಇದೆ ಇದರಿಂದಾಗಿ ಬಸದಿಗಳನ್ನು ಅರಕ್ಷಿತ ಸ್ಮಾರಕಗಳ ಪಟ್ಟಿಯಿಂದ ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.


ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ! ಪದ್ಮಪ್ರಸಾದ್ ಅಜಿಲ ಅಳದಂಗಡಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಸುರೇಂದ್ರ ಕುಮಾರ್ ಜೈನ್ ಧರ್ಮಸ್ಥಳ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ಅಜಿತ್ ಕುಮಾರ್ ಉಳಿಯಬೀಡು, ವೀರೇಂದ್ರ ಕುಮಾರ್ ಅಳದಂಗಡಿ, ಪ್ರಮೋದ್ ಕುಮಾರ್ ಬಳೆoಜ, ಜಿತೇಶ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!