ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
error: Content is protected !!