23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya
error: Content is protected !!