23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya
error: Content is protected !!