July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
error: Content is protected !!