25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ ಅ.7 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದ್ವೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಅಭ್ಯಾಸ್ ಪಿ .ಯು ಕಾಲೇಜಿನ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಉಪ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಕಾರ್ಯಕ್ರಮದ ಕುರಿತು ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರಾಮಾಯಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಕಾರ್ತಿಕೇಯ ಎಂ.ಎಸ್ ಅವರು ಇಂಥಹ ಮೌಲ್ಯದಾಯಕ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿ ಅನಿವಾರ್ಯವಾಗಿದ್ದು ಮುಂದಿನ ದಿನಗಳಲ್ಲಿ ಕೂಡ ಇಂಥಹ ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕ ಸುಧೀರ್ ಸ್ವಾಗತಿಸಿ, ನಿರೂಪಿಸಿದರು. ನಿಲಯ ಪಾಲಕರಾದ ಜೀತೇಶ್ ವಂದಿಸಿದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!