ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ ಅ.7 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದ್ವೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಅಭ್ಯಾಸ್ ಪಿ .ಯು ಕಾಲೇಜಿನ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಉಪ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ ಕಾರ್ಯಕ್ರಮದ ಕುರಿತು ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರಾಮಾಯಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಕಾರ್ತಿಕೇಯ ಎಂ.ಎಸ್ ಅವರು ಇಂಥಹ ಮೌಲ್ಯದಾಯಕ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿ ಅನಿವಾರ್ಯವಾಗಿದ್ದು ಮುಂದಿನ ದಿನಗಳಲ್ಲಿ ಕೂಡ ಇಂಥಹ ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕ ಸುಧೀರ್ ಸ್ವಾಗತಿಸಿ, ನಿರೂಪಿಸಿದರು. ನಿಲಯ ಪಾಲಕರಾದ ಜೀತೇಶ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya
error: Content is protected !!