23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ವೇಣೂರು :ಇಲ್ಲಿಯ ನಿಟ್ಟಡೆ ಪ್ರದೇಶದಲ್ಲಿರುವ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಅ.07 ರಂದು ಶಿಕ್ಷಕರ ದಿನಾಚರಣೆ ಭಕ್ತಿ, ಗೌರವ ಮತ್ತು ಹರ್ಷೋದ್ಗಾರದಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವು ಸಂಸ್ಥೆಯ ಅಧ್ಯಕ್ಷ ಗಿರೀಶ್ ಕೆ.ಎಚ್. ಮಾತನಾಡಿ , “ಶಿಕ್ಷಕರು ಸಮಾಜದ ಶ್ರೇಷ್ಠ ಮಾರ್ಗದರ್ಶಕರು. ಅವರ ತ್ಯಾಗ, ಶ್ರಮ ಮತ್ತು ಬೋಧನೆಯಿಂದ ವಿದ್ಯಾರ್ಥಿಗಳ ಭವಿಷ್ಯ ಬೆಳಗುತ್ತದೆ,” ಎಂದು ಹೇಳಿದರು.

ನಂತರ ಸಂಸ್ಥೆಯ ಸಂಚಾಲಕರಾದ ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುತ್ತಾರೆ ಎಂದು ಅಭಿಪ್ರಾಯಪಟ್ಟರು. ಅವರು ಶಿಕ್ಷಕರ ಸೇವಾ ಮನೋಭಾವ ಮತ್ತು ನಿಷ್ಠೆಯನ್ನು ಶ್ಲಾಘಿಸಿದರು.

ಕುಂಭಶ್ರೀ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಓಮನಾ ಎಂ.ಎ. , “ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ಅವರು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಶಿಲ್ಪಿಗಳು,” ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ದಿನದ ವಿಶೇಷತೆಯಾಗಿ, ಸಂಸ್ಥೆಯ ಎಲ್ಲಾ ವಿಭಾಗಗಳಾದ ಪ್ರೀ-ಪ್ರೈಮರಿ, ಪ್ರೈಮರಿ, ಹೈ ಸ್ಕೂಲ್ ಹಾಗೂ ಪಿ.ಯು. ಕಾಲೇಜುಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ವಿವಿಧ ಕ್ರೀಡಾ ಮತ್ತು ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಎಲ್ಲರೂ ಉತ್ಸಾಹಭರಿತವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮೆರೆದರು.

ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗೆ ಗೌರವ ಸೂಚಕ ಬಹುಮಾನಗಳನ್ನು ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಕಾಡೆಮಿಕ್ ಅಡ್ವೈಸರ್ ಮನೋಜ್ ಎಸ್., ಪ್ರೀ-ಪ್ರೈಮರಿ, ಪ್ರೈಮರಿ ಹಾಗೂ ಹೈ ಸ್ಕೂಲ್ ಮುಖ್ಯೋಪಾಧ್ಯಾಯರು , ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕುಂಭಶ್ರೀ ಶಿಕ್ಷಣ ಸಂಸ್ಥೆಯ ಮಕ್ಕಳು ನಿರ್ವಹಿಸಿ, ತಮ್ಮ ಕಲಾತ್ಮಕ ಪ್ರದರ್ಶನಗಳಿಂದ ಎಲ್ಲರ ಮನ ಗೆದ್ದರು.ಎಲ್ಲ ಶಿಕ್ಷಕರಿಗೂ ಸ್ಮರಣಿಕೆಗಳನ್ನು ವಿತರಿಸಲಾಯಿತು.

Related posts

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya
error: Content is protected !!