23.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಅ.9ರಂದು ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ ಕಾರಣ ಸುಮಾರು 6 ಅಡಿ ಆಳಕ್ಕೆ ಬಿದ್ದು ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆರೆದ ಚರಂಡಿ ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂಗವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ರಸ್ತೆ ಬದಿ ಚರಂಡಿಗಳನ್ನು ನಿರ್ಮಿಸಲಾಗಿದ್ದು ಇದನ್ನು ಸಂಪೂರ್ಣ ಮುಚ್ಚಲಾಗಿಲ್ಲ ಚರಂಡಿ ಭಾಗ ಅಲ್ಲಲ್ಲಿ ತೆರೆದುಕೊಂಡಿದ್ದು ಈಗಾಗಲೇ ಹಲವರು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವರಿಕೆ ಮಾಡಲಾಗಿದೆ. ಸಂಬಂಧಪಟ್ಟವರು ಒಂದೆರಡು ಕಡೆ ಮಾತ್ರ ಸ್ಲ್ಯಾಬ್ ಅಳವಡಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಲ್ಲಿ ಗೊಂದಲ ಉಂಟಾಗುತ್ತಿದ್ದು ಚರಂಡಿಗೆ ಬಿದ್ದು ಗಾಯಗೊಳ್ಳುತ್ತಿರುವುದು ಮುಂದುವರೆದಿದೆ.

Related posts

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya
error: Content is protected !!