August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಅ. 9 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಹೋರಾಟಗಾರ ಪ್ರಸನ್ನ ರವಿ ಜತೆ ಠಾಣೆಗೆ ಬಂದ ಕುಸುಮಾವತಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿರುವ ಆರು ಮಂದಿ ವಿರುದ್ದ ದೂರು ನೀಡಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಪ್ರಸನ್ನ ರವಿ, 13 ಜನರು ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಮೂಲಕ ಸೌಜನ್ಯ ತಾಯಿ ಕುಸುಮಾವತಿ ಅವರ ತೇಜೋವಧೆ ಮಾಡುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆಯೇ ನಾನು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದೆ ಇದಾದ ಬಳಿಕವೂ ಇವರಲ್ಲಿ 6 ಮಂದಿ ತಮ್ಮ ದುಷ್ಕೃತ್ಯ ಮುಂದುವರಿಸಿದ್ದಾರೆ. ಹೀಗಾಗಿ ವೈಯಕ್ತಿಕವಾಗಿ ಅಂಥವರ ವಿರುದ್ಧ ದೂರು ನೀಡುವಂತೆ ಎಸ್‌ಪಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇವತ್ತು 6 ಮಂದಿ ವಿರುದ್ಧ ದೂರು ನೀಡಿದ್ದೇನೆ ಎಂದರು

ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಇನ್ನು ಮುಂದೆಯೂ ಅವರು ತೇಜೋವಧೆ ಮುಂದುವರಿಸಿದರೆ ಆಗ ನಾವು ಕಾನೂನು ಕೈಗೆತ್ತಿಕೊಳ್ಳಲು ಅವಕಾಶವನ್ನು ಪೊಲೀಸರೇ ಸೃಷ್ಟಿ ಮಾಡಬಾರದು. ಎಸ್‌ಪಿ ಅವರ ಮಾತಿನ ಮೇಲೆ ನಮಗೆ ಭರವಸೆ ಇದೆ. ಅವರು ಈ ಕೃತ್ಯದ ಬಗ್ಗೆ ತುಂಬಾ ಬೇಸರ ವ್ಯಕ್ತಪಡಿಸಿದ್ದು, ಕಾನೂನು ಕ್ರಮದ ಭರವಸೆ ನೀಡಿದ್ದಾರೆ ಎಂದರು.
ತೇಜೋವಧೆ ಮಾಡುತ್ತಿರುವ ಕೆಲವರು ಅದು ತಮ್ಮ ಖಾತೆಯಲ್ಲ, ನಕಲಿ ಖಾತೆ ಎಂದು ಸಮಜಾಯಿಷಿ ನೀಡುತ್ತಿರುವುದು ಗೊತ್ತಾಗಿದೆ. ನಕಲಿ ಖಾತೆಯೇ ಆಗಿದ್ದರೆ ಅದರಲ್ಲಿ ಆ ವ್ಯಕ್ತಿಯ ದಿನಚರಿಯ ಎಲ್ಲ ಫೋಟೋಗಳು ದಿನಂಪ್ರತಿ ಅಪ್ ಲೋಡ್ ಆಗುವುದಾದರೂ ಹೇಗೆ ? ನಕಲಿ ಖಾತೆ ಎಂದಾದರೆ ಆ ವ್ಯಕ್ತಿ ಪೊಲೀಸ್ ದೂರು ನೀಡಿ, ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ದುರುಪಯೋಗ ಮಾಡುತ್ತಿದ್ದಾರೆ ಎಂದು ಪೊಲೀಸ್ ದೂರು ನೀಡಬಹುದಿತ್ತಲ್ವ ಎಂದು ಪ್ರಸನ್ನ ರವಿ ಪ್ರಶ್ನಿಸಿದರು.

Related posts

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!