August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ
ಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ.

ತಾಯಿ‌ ಬಳಿ ಹತ್ತಿರದ ತೋಟದಿಂದ ತೆಂಗಿನಕಾಯಿ ತರಲು ಹೇಳಿದ ಸಂತೋಷ್ ಮನೆಯ ಗೋಡೆಯ ಅಡ್ಡ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾರೆ ಕೆಲಸದ ವೃತ್ತಿ ನಡೆಸುತ್ತಿದ್ದ ಸಂತೋಷ್ ಆರೋಗ್ಯದ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದರು, ಇದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Related posts

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!