May 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಅ.9ರಂದು ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ ಕಾರಣ ಸುಮಾರು 6 ಅಡಿ ಆಳಕ್ಕೆ ಬಿದ್ದು ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆರೆದ ಚರಂಡಿ ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂಗವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ರಸ್ತೆ ಬದಿ ಚರಂಡಿಗಳನ್ನು ನಿರ್ಮಿಸಲಾಗಿದ್ದು ಇದನ್ನು ಸಂಪೂರ್ಣ ಮುಚ್ಚಲಾಗಿಲ್ಲ ಚರಂಡಿ ಭಾಗ ಅಲ್ಲಲ್ಲಿ ತೆರೆದುಕೊಂಡಿದ್ದು ಈಗಾಗಲೇ ಹಲವರು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವರಿಕೆ ಮಾಡಲಾಗಿದೆ. ಸಂಬಂಧಪಟ್ಟವರು ಒಂದೆರಡು ಕಡೆ ಮಾತ್ರ ಸ್ಲ್ಯಾಬ್ ಅಳವಡಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಲ್ಲಿ ಗೊಂದಲ ಉಂಟಾಗುತ್ತಿದ್ದು ಚರಂಡಿಗೆ ಬಿದ್ದು ಗಾಯಗೊಳ್ಳುತ್ತಿರುವುದು ಮುಂದುವರೆದಿದೆ.

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!