24.6 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಅ.9ರಂದು ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ ಕಾರಣ ಸುಮಾರು 6 ಅಡಿ ಆಳಕ್ಕೆ ಬಿದ್ದು ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆರೆದ ಚರಂಡಿ ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂಗವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ರಸ್ತೆ ಬದಿ ಚರಂಡಿಗಳನ್ನು ನಿರ್ಮಿಸಲಾಗಿದ್ದು ಇದನ್ನು ಸಂಪೂರ್ಣ ಮುಚ್ಚಲಾಗಿಲ್ಲ ಚರಂಡಿ ಭಾಗ ಅಲ್ಲಲ್ಲಿ ತೆರೆದುಕೊಂಡಿದ್ದು ಈಗಾಗಲೇ ಹಲವರು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವರಿಕೆ ಮಾಡಲಾಗಿದೆ. ಸಂಬಂಧಪಟ್ಟವರು ಒಂದೆರಡು ಕಡೆ ಮಾತ್ರ ಸ್ಲ್ಯಾಬ್ ಅಳವಡಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಲ್ಲಿ ಗೊಂದಲ ಉಂಟಾಗುತ್ತಿದ್ದು ಚರಂಡಿಗೆ ಬಿದ್ದು ಗಾಯಗೊಳ್ಳುತ್ತಿರುವುದು ಮುಂದುವರೆದಿದೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!