May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಅ. 9 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಹೋರಾಟಗಾರ ಪ್ರಸನ್ನ ರವಿ ಜತೆ ಠಾಣೆಗೆ ಬಂದ ಕುಸುಮಾವತಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿರುವ ಆರು ಮಂದಿ ವಿರುದ್ದ ದೂರು ನೀಡಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಪ್ರಸನ್ನ ರವಿ, 13 ಜನರು ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಮೂಲಕ ಸೌಜನ್ಯ ತಾಯಿ ಕುಸುಮಾವತಿ ಅವರ ತೇಜೋವಧೆ ಮಾಡುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆಯೇ ನಾನು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದೆ ಇದಾದ ಬಳಿಕವೂ ಇವರಲ್ಲಿ 6 ಮಂದಿ ತಮ್ಮ ದುಷ್ಕೃತ್ಯ ಮುಂದುವರಿಸಿದ್ದಾರೆ. ಹೀಗಾಗಿ ವೈಯಕ್ತಿಕವಾಗಿ ಅಂಥವರ ವಿರುದ್ಧ ದೂರು ನೀಡುವಂತೆ ಎಸ್‌ಪಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇವತ್ತು 6 ಮಂದಿ ವಿರುದ್ಧ ದೂರು ನೀಡಿದ್ದೇನೆ ಎಂದರು

ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಇನ್ನು ಮುಂದೆಯೂ ಅವರು ತೇಜೋವಧೆ ಮುಂದುವರಿಸಿದರೆ ಆಗ ನಾವು ಕಾನೂನು ಕೈಗೆತ್ತಿಕೊಳ್ಳಲು ಅವಕಾಶವನ್ನು ಪೊಲೀಸರೇ ಸೃಷ್ಟಿ ಮಾಡಬಾರದು. ಎಸ್‌ಪಿ ಅವರ ಮಾತಿನ ಮೇಲೆ ನಮಗೆ ಭರವಸೆ ಇದೆ. ಅವರು ಈ ಕೃತ್ಯದ ಬಗ್ಗೆ ತುಂಬಾ ಬೇಸರ ವ್ಯಕ್ತಪಡಿಸಿದ್ದು, ಕಾನೂನು ಕ್ರಮದ ಭರವಸೆ ನೀಡಿದ್ದಾರೆ ಎಂದರು.
ತೇಜೋವಧೆ ಮಾಡುತ್ತಿರುವ ಕೆಲವರು ಅದು ತಮ್ಮ ಖಾತೆಯಲ್ಲ, ನಕಲಿ ಖಾತೆ ಎಂದು ಸಮಜಾಯಿಷಿ ನೀಡುತ್ತಿರುವುದು ಗೊತ್ತಾಗಿದೆ. ನಕಲಿ ಖಾತೆಯೇ ಆಗಿದ್ದರೆ ಅದರಲ್ಲಿ ಆ ವ್ಯಕ್ತಿಯ ದಿನಚರಿಯ ಎಲ್ಲ ಫೋಟೋಗಳು ದಿನಂಪ್ರತಿ ಅಪ್ ಲೋಡ್ ಆಗುವುದಾದರೂ ಹೇಗೆ ? ನಕಲಿ ಖಾತೆ ಎಂದಾದರೆ ಆ ವ್ಯಕ್ತಿ ಪೊಲೀಸ್ ದೂರು ನೀಡಿ, ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ದುರುಪಯೋಗ ಮಾಡುತ್ತಿದ್ದಾರೆ ಎಂದು ಪೊಲೀಸ್ ದೂರು ನೀಡಬಹುದಿತ್ತಲ್ವ ಎಂದು ಪ್ರಸನ್ನ ರವಿ ಪ್ರಶ್ನಿಸಿದರು.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!