25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

ಉಜಿರೆ: ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯ ಎಲ್ ಕೆ ಜಿ ವಿದ್ಯಾರ್ಥಿಗಳಿಗಾಗಿ ಅ. 9 ರಂದು ಸೃಜನಾತ್ಮಕ ಚಟುವಟಿಕೆ ನಡೆಸಲಾಯಿತು. ಈ ಚಟುವಟಿಕೆಯಲ್ಲಿ ಮಕ್ಕಳು ಕ್ಲೇ/ಡೋ ಕಲೆಗಳಿಂದ ಹಣ್ಣು ಮತ್ತು ತರಕಾರಿಗಳ ಬಣ್ಣ ಮುದ್ರಣ ಮಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಕರು ಮಕ್ಕಳಿಗೆ ಹಣ್ಣುಗಳು ಮತ್ತು ತರಕಾರಿಗಳ ಪರಿಚಯ ನೀಡಿ, ಅವುಗಳ ಪೌಷ್ಟಿಕ ಮಹತ್ವವನ್ನು ವಿವರಿಸಿದರು. ಮಕ್ಕಳು ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ತಾವು ತಯಾರಿಸಿದ ಹಣ್ಣು ಹಾಗೂ ತರಕಾರಿಗಳನ್ನು ಆತ್ಮವಿಶ್ವಾಸದಿಂದ ವಿವರಣೆ ಮಾಡಿದರು.

ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಹಾಜರಾಗಿ, ಮಕ್ಕಳ ಸೃಜನಶೀಲತೆಯನ್ನು ಮೆಚ್ಚಿದರು ಹಾಗೂ ಶಿಕ್ಷಕರು ಮತ್ತು ಪೋಷಕರು ನೀಡಿದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಚಟುವಟಿಕೆ ಅತ್ಯಂತ ಯಶಸ್ವಿಯಾಗಿ ನೆರವೇರಿತು ಮತ್ತು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹಾಗೂ ಸೃಜನಾತ್ಮಕತೆ ಹೆಚ್ಚಿಸಲು ಸಹಾಯವಾಯಿತು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!