September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಕಾರ್ಮಿಕ ಸಚಿವರು ಉತ್ಸಾಹಿ ಕಾರ್ಮಿಕ ಇಲಾಖೆಯಲ್ಲಿ ಜನೋಪ ಯೋಗಿ ಯೋಜನೆಗಳನ್ನು ತಂದು ಮೋಟಾರ್ ಸಾರಿಗೆ ಸಂಬಂಧಿತ ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಯೋಜನೆಗಳನ್ನು ನೀಡಿದ ಸಂತೋಷ್ ಲಾಡ್ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ಜಿಲ್ಲಾ ಸಂಘ ಹಾಗೂ ವಲಯಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಳಿಂದ ಶಾಲು ಹೊದಿಸಿ ಹೂಗುಚ್ಛ ನೀಡಿ ಫಲ ಪುಷ್ಪಾದಿ ಗೌರವಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಜಿಯ ಸುಲ್ತಾನ್ ಹಾಗೂ ಕಾರ್ಮಿಕ ಅಧಿಕಾರಿ ಉಪವಿಭಾಗ ಶ್ರೀಮತಿ ವಿಲ್ಮಾ ಎಲಿಜಬೆತ್ ತಾವ್ರ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ವಲಯಗಳಿಂದ ಉತ್ತಮವಾದ ಪ್ರೋತ್ಸಾಹ ದೊರೆಯಿತು. ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರು, ಕಡಬ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ,ಸದಸ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಗ್ಯಾರೇಜ್ ಮಾಲಕರ ಸಂಘದ ಕೊಡುಗೆಯನ್ನು ನೀಡಿದರು. ಕಾರ್ಮಿಕ ಇಲಾಖೆಯ ಈ ಕಾರ್ಯಕ್ರಮವು ಬಹಳ ಅಚ್ಚುಗಟ್ಟಾಗಿ ನೂರಾರು ಕಾರ್ಮಿಕರ ಉಪಸ್ಥಿತಿಯಲ್ಲಿ ನಡೆಯಿತು.

Related posts

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!