September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಅಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಮಾನಸಿಕ ಕಾಯಿಲೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಮಾನಸಿಕ ಆರೋಗ್ಯವಿಲ್ಲದಿದ್ದರೆ ಒಬ್ಬ ಮನುಷ್ಯ ನೆಮ್ಮದಿಯಾಗಿ, ಸುಖವಾಗಿ ಬಾಳಲು ಸಾಧ್ಯವಿಲ್ಲ. ಇದಕ್ಕೆ ಧ್ಯಾನ ಮತ್ತು ದೈವಿಕ ಶಕ್ತಿಯು ಮುಖ್ಯ ಪಾತ್ರ ವಹಿಸುತ್ತದೆ. ಪ್ರೀತಿ ಮತ್ತು ತಿಳುವಳಿಕೆಯಿಂದ ಪರಸ್ಪರರ ಮಾನಸಿಕ ಆರೋಗ್ಯವನ್ನು ಬೆಂಬಲಿಸೋಣ ಎಂದರು.

ಅತಿಥಿಗಳಾಗಿ ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ಉಪನ್ಯಾಸಕರಾದ ಸನಲ್ ಪ್ರಮೋದ್ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿ, ಮಾನಸಿಕ ಆರೋಗ್ಯವಾಗಿರುವ ವ್ಯಕ್ತಿಯು ಜೀವನದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ ಎಂದರು.

ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಶ್ರೀಯುತ ಡಾ.ಶಿವಾನಂದ ಸ್ವಾಮಿಯವರು, ಒಬ್ಬ ವ್ಯಕ್ತಿಗೆ ಮಾನಸಿಕ ಕಾಯಿಲೆ ಬರಬಹುದಾದ ಸಾಧ್ಯತೆಗಳ ಕಾರಣಗಳು, ವಿಧಗಳು, ಲಕ್ಷಣಗಳು, ಪರಿಹಾರಗಳನ್ನು ವಿವರಿಸಿ, ದೈಹಿಕವಾಗಿ ನಾವೆಷ್ಟೇ ಆರೋಗ್ಯವಾಗಿದ್ದರೂ, ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಎಲ್ಲವೂ ಶೂನ್ಯ. ನಮ್ಮ ಜೀವನದಲ್ಲಿ ನಾವು ಸದೃಢರಾಗಿರಬೇಕೆಂದರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಹಣಕಾಸು ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಯು.ಪಿ., ಆಶ್ರಮ ನಿವಾಸಿಯಾದ ನಾಗವೇಣಿಯವರು ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ವಿದ್ಯಾರ್ಥಿಗಳು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಶ್ರೀಮತಿ ಸಿಂಧು ವಿ.ಎಂ. ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ಸುಧಾಕರ್ ವಂದಿಸಿದರು. ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು.

Related posts

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!