July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಅಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಮಾನಸಿಕ ಕಾಯಿಲೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಮಾನಸಿಕ ಆರೋಗ್ಯವಿಲ್ಲದಿದ್ದರೆ ಒಬ್ಬ ಮನುಷ್ಯ ನೆಮ್ಮದಿಯಾಗಿ, ಸುಖವಾಗಿ ಬಾಳಲು ಸಾಧ್ಯವಿಲ್ಲ. ಇದಕ್ಕೆ ಧ್ಯಾನ ಮತ್ತು ದೈವಿಕ ಶಕ್ತಿಯು ಮುಖ್ಯ ಪಾತ್ರ ವಹಿಸುತ್ತದೆ. ಪ್ರೀತಿ ಮತ್ತು ತಿಳುವಳಿಕೆಯಿಂದ ಪರಸ್ಪರರ ಮಾನಸಿಕ ಆರೋಗ್ಯವನ್ನು ಬೆಂಬಲಿಸೋಣ ಎಂದರು.

ಅತಿಥಿಗಳಾಗಿ ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ಉಪನ್ಯಾಸಕರಾದ ಸನಲ್ ಪ್ರಮೋದ್ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿ, ಮಾನಸಿಕ ಆರೋಗ್ಯವಾಗಿರುವ ವ್ಯಕ್ತಿಯು ಜೀವನದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ ಎಂದರು.

ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಶ್ರೀಯುತ ಡಾ.ಶಿವಾನಂದ ಸ್ವಾಮಿಯವರು, ಒಬ್ಬ ವ್ಯಕ್ತಿಗೆ ಮಾನಸಿಕ ಕಾಯಿಲೆ ಬರಬಹುದಾದ ಸಾಧ್ಯತೆಗಳ ಕಾರಣಗಳು, ವಿಧಗಳು, ಲಕ್ಷಣಗಳು, ಪರಿಹಾರಗಳನ್ನು ವಿವರಿಸಿ, ದೈಹಿಕವಾಗಿ ನಾವೆಷ್ಟೇ ಆರೋಗ್ಯವಾಗಿದ್ದರೂ, ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಎಲ್ಲವೂ ಶೂನ್ಯ. ನಮ್ಮ ಜೀವನದಲ್ಲಿ ನಾವು ಸದೃಢರಾಗಿರಬೇಕೆಂದರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಹಣಕಾಸು ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಯು.ಪಿ., ಆಶ್ರಮ ನಿವಾಸಿಯಾದ ನಾಗವೇಣಿಯವರು ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ವಿದ್ಯಾರ್ಥಿಗಳು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಶ್ರೀಮತಿ ಸಿಂಧು ವಿ.ಎಂ. ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ಸುಧಾಕರ್ ವಂದಿಸಿದರು. ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು.

Related posts

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!