23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಕಾರ್ಮಿಕ ಸಚಿವರು ಉತ್ಸಾಹಿ ಕಾರ್ಮಿಕ ಇಲಾಖೆಯಲ್ಲಿ ಜನೋಪ ಯೋಗಿ ಯೋಜನೆಗಳನ್ನು ತಂದು ಮೋಟಾರ್ ಸಾರಿಗೆ ಸಂಬಂಧಿತ ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಯೋಜನೆಗಳನ್ನು ನೀಡಿದ ಸಂತೋಷ್ ಲಾಡ್ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ಜಿಲ್ಲಾ ಸಂಘ ಹಾಗೂ ವಲಯಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಳಿಂದ ಶಾಲು ಹೊದಿಸಿ ಹೂಗುಚ್ಛ ನೀಡಿ ಫಲ ಪುಷ್ಪಾದಿ ಗೌರವಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಜಿಯ ಸುಲ್ತಾನ್ ಹಾಗೂ ಕಾರ್ಮಿಕ ಅಧಿಕಾರಿ ಉಪವಿಭಾಗ ಶ್ರೀಮತಿ ವಿಲ್ಮಾ ಎಲಿಜಬೆತ್ ತಾವ್ರ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ವಲಯಗಳಿಂದ ಉತ್ತಮವಾದ ಪ್ರೋತ್ಸಾಹ ದೊರೆಯಿತು. ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರು, ಕಡಬ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ,ಸದಸ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಗ್ಯಾರೇಜ್ ಮಾಲಕರ ಸಂಘದ ಕೊಡುಗೆಯನ್ನು ನೀಡಿದರು. ಕಾರ್ಮಿಕ ಇಲಾಖೆಯ ಈ ಕಾರ್ಯಕ್ರಮವು ಬಹಳ ಅಚ್ಚುಗಟ್ಟಾಗಿ ನೂರಾರು ಕಾರ್ಮಿಕರ ಉಪಸ್ಥಿತಿಯಲ್ಲಿ ನಡೆಯಿತು.

Related posts

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!