24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಮುಂಡಾಜೆ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.), ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಹಾಗೂ ಮುಂಡಾಜೆ ಪ್ರೌಢ ಶಾಲೆ ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಅ.10 ರಂದು ಜರುಗಿತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ದೀಪ ಪ್ರಜ್ವಲನೆಯ ಮೂಲಕ ಪಂದ್ಯಾಟಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿ, ಮುಂಡಾಜೆ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗಳನ್ನು ಪ್ರಶಂಸಿಸಿ, ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದರು.


ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿಯ ನಿಕಟಪೂರ್ವ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪಂದ್ಯಾಟಕ್ಕೆ ಶುಭಹಾರೈಸಿದರು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ ಎಂ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯರಾಜ್ ಜೈನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿರಾಜ್ ಗೌಡ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳು ಉಜಿರೆಯ ಕ್ರೀಡಾ ಕಾರ್ಯದರ್ಶಿ ರಮೇಶ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಕೋಶಾಧಿಕಾರಿ ಡಾ| ರವಿ ಎಂ ಎನ್, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಟಿ, ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ ಎಸ್, ಪ. ಪೂ. ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂ. ಮಾ. ಶಾಲೆ ಮುಂಡಾಜೆಯ ಮುಖ್ಯ ಶಿಕ್ಷಕಿ ಚಂದ್ರಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಾಲಿಬಾಲ್ ಆಟಗಾರ್ತಿ ಯಕ್ಷಿತಾ ಇವರು ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಪ. ಪೂ. ಕಾಲೇಜಿನ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಅಜಿತ್ ಕುಮಾರ್ ಜೈನ್ ಕೊಕ್ರಾಡಿ ನಿರೂಪಿಸಿ, ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೃಷ್ಣಾನಂದ ರಾವ್ ಧನ್ಯವಾದಗೈದರು.


ಕ್ರೀಡಾ ವಿಭಾಗ, ಪ. ಪೂ. ಕಾಲೇಜಿನ ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸಹಕರಿಸಿದರು. ಕ್ರೀಡಾಪಟುಗಳನ್ನು ಸೋಮಂತಡ್ಕ- ಮುಂಡಾಜೆ ಪೇಟೆಯಿಂದ ಗೌರವಪೂರ್ವಕವಾಗಿ ವಾದ್ಯ ಘೋಷಗಳೊಂದಿಗೆ ಸಂಭ್ರಮದಿಂದ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya
error: Content is protected !!