25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

ಉಜಿರೆ : ವಿಶ್ವ ರಜೋನಿವೃತ್ತಿ ದಿನಾಚರಣೆಯ (ಮೆನೋಪಾಸ್ ದಿನ) ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ 45 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಡಾ. ಭಾರತಿ ಗೋಪಾಲಕೃಷ್ಣ ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ,ರಜೋನಿವೃತ್ತಿ (Menopause) ಎಂಬುದು ಚರ್ಚೆಯ ವಿಷಯವಲ್ಲ, ಗಂಭೀರ ಆರೋಗ್ಯ ಸಮಸ್ಯೆಯಲ್ಲ. ಇದು ಮಹಿಳೆಯರಲ್ಲಿ 45 ವರ್ಷ ವಯಸ್ಸಿನ ನಂತರ ಸಹಜವಾಗಿ ನಡೆಯುವ ಪ್ರಕ್ರಿಯೆ. ಮಹಿಳೆಯರು ರಜೋನಿವೃತ್ತಿಯ ನಂತರವೂ ನೋವಿಲ್ಲದೆ, ಚೈತನ್ಯಭರಿತವಾಗಿ ಬದುಕಬಹುದು — ಆದರೆ ಅದಕ್ಕಾಗಿ ಸರಿಯಾದ ಸಮಯದಲ್ಲಿ ತಕ್ಕ ಚಿಕಿತ್ಸೆಯನ್ನು ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

ಡಾ. ಅಂಕಿತಾ (ಸ್ತ್ರೀರೋಗ ತಜ್ಞೆ ಹಾಗೂ ಲ್ಯಾಪರೋಸ್ಕೋಪಿಕ್ ಶಸ್ತ್ರ ಚಿಕಿತ್ಸಾ ತಜ್ಞರು) ಅವರು ಮಾತನಾಡಿ, “ಮಹಿಳೆಯರು 40 ರಿಂದ 45 ವರ್ಷ ವಯಸ್ಸಿನ ನಂತರ ರಜೋನಿವೃತ್ತಿಯನ್ನು ಅನುಭವಿಸುತ್ತಾರೆ. ಇದು ಸಹಜವಾದ ಶಾರೀರಿಕ ಪ್ರಕ್ರಿಯೆಯಾಗಿದ್ದು, ಇದನ್ನು ಸಮಸ್ಯೆಯೆಂದು ಭಾವಿಸಬಾರದು. ಈ ಅವಧಿಯಲ್ಲಿ ಅನೇಕ ಬದಲಾವಣೆಗಳು ಕಾಣಿಸಬಹುದು. ಸಮಯಕ್ಕೆ ಸರಿಯಾದ ತಪಾಸಣೆ ಮಾಡಿಸಿಕೊಂಡರೆ ಪರಿಹಾರ ದೊರೆಯುತ್ತದೆ. ರಜೋನಿವೃತ್ತಿ ಸಮಸ್ಯೆಯಲ್ಲ — ಪ್ರತಿ ಮಹಿಳೆಯೂ ಎದುರಿಸುವ ಒಂದು ಹಂತ. ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಿ, ನಾವು ಚಿಕಿತ್ಸೆಯನ್ನು ನೀಡುತ್ತೇವೆ,” ಎಂದು ಹೇಳಿದರು.

ಡಾ. ನವ್ಯಾ ಭಟ್ (ಸ್ತ್ರೀರೋಗ ತಜ್ಞೆ ಹಾಗೂ ಐವಿಎಫ್ ತಜ್ಞೆ) ಅವರು ಮಾತನಾಡಿ, “ಪ್ರತಿ ಮಹಿಳೆಯ ಸಮಸ್ಯೆಗೆ ಪರಿಹಾರ ಮತ್ತು ಚಿಕಿತ್ಸೆ ಇದೆ. ಮಹಿಳೆಯರು ತಮ್ಮ ಸಮಸ್ಯೆಗಳನ್ನು ತೆರೆದ ಮನಸ್ಸಿನಿಂದ ಹಂಚಿಕೊಂಡರೆ ಮಾತ್ರ ನಾವು ಸರಿಯಾದ ಚಿಕಿತ್ಸೆ ನೀಡಲು ಸಾಧ್ಯ. ಇಂದಿನ ಉಚಿತ ಶಿಬಿರದ ಮೂಲಕ ನಾವು ಮಹಿಳೆಯರಿಗೆ ಪರಿಹಾರ ನೀಡುತ್ತಿದ್ದೇವೆ,” ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಬೆನಕ ಆಸ್ಪತ್ರೆಯ ಪಿಆರ್‌ಒ ಎಸ್. ಜಿ. ಭಟ್ ಅವರು ಸ್ವಾಗತಿಸಿ ವಂದಿಸಿದರು. ಬೆನಕ ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕರಾದ ದೇವಸ್ಯ ವರ್ಗೀಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya
error: Content is protected !!