25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಅಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಮಾನಸಿಕ ಕಾಯಿಲೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಮಾನಸಿಕ ಆರೋಗ್ಯವಿಲ್ಲದಿದ್ದರೆ ಒಬ್ಬ ಮನುಷ್ಯ ನೆಮ್ಮದಿಯಾಗಿ, ಸುಖವಾಗಿ ಬಾಳಲು ಸಾಧ್ಯವಿಲ್ಲ. ಇದಕ್ಕೆ ಧ್ಯಾನ ಮತ್ತು ದೈವಿಕ ಶಕ್ತಿಯು ಮುಖ್ಯ ಪಾತ್ರ ವಹಿಸುತ್ತದೆ. ಪ್ರೀತಿ ಮತ್ತು ತಿಳುವಳಿಕೆಯಿಂದ ಪರಸ್ಪರರ ಮಾನಸಿಕ ಆರೋಗ್ಯವನ್ನು ಬೆಂಬಲಿಸೋಣ ಎಂದರು.

ಅತಿಥಿಗಳಾಗಿ ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ಉಪನ್ಯಾಸಕರಾದ ಸನಲ್ ಪ್ರಮೋದ್ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿ, ಮಾನಸಿಕ ಆರೋಗ್ಯವಾಗಿರುವ ವ್ಯಕ್ತಿಯು ಜೀವನದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ ಎಂದರು.

ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಶ್ರೀಯುತ ಡಾ.ಶಿವಾನಂದ ಸ್ವಾಮಿಯವರು, ಒಬ್ಬ ವ್ಯಕ್ತಿಗೆ ಮಾನಸಿಕ ಕಾಯಿಲೆ ಬರಬಹುದಾದ ಸಾಧ್ಯತೆಗಳ ಕಾರಣಗಳು, ವಿಧಗಳು, ಲಕ್ಷಣಗಳು, ಪರಿಹಾರಗಳನ್ನು ವಿವರಿಸಿ, ದೈಹಿಕವಾಗಿ ನಾವೆಷ್ಟೇ ಆರೋಗ್ಯವಾಗಿದ್ದರೂ, ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಎಲ್ಲವೂ ಶೂನ್ಯ. ನಮ್ಮ ಜೀವನದಲ್ಲಿ ನಾವು ಸದೃಢರಾಗಿರಬೇಕೆಂದರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಹಣಕಾಸು ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಯು.ಪಿ., ಆಶ್ರಮ ನಿವಾಸಿಯಾದ ನಾಗವೇಣಿಯವರು ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ವಿದ್ಯಾರ್ಥಿಗಳು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಶ್ರೀಮತಿ ಸಿಂಧು ವಿ.ಎಂ. ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ಸುಧಾಕರ್ ವಂದಿಸಿದರು. ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು.

Related posts

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
error: Content is protected !!