ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ತೆಂಕಕಾರಂದೂರು ಅವಿರೋಧ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರುಗಲಿದ್ದು, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿ ನೆರವೇರಿಸಲಿದ್ದಾರೆ.











