September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಟೌನ್‌ನಲ್ಲಿ ತಲಾ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಕಾರ್ಯಕ್ರಮ ಅ.11 ರಂದು ಲಾಯಿಲದ ಕಾಶಿಬೆಟ್ಟು ಬಳಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಶಿಲಾನ್ಯಾಸ ನೆರವೇರಿಸಿ, ನಾಮಫಲಕ ಅನವಾರಣಗೊಳಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ್ತ ಅಧ್ಯಕ್ಷ ಕೆ.ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತ ಡಿ.ಎಸ್.ಗಟ್ಟಿ, ಕರ್ನಾಟಕ ಪರಿಸರ ಮತ್ತು ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ದ.ಕ.ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ಪ.ಪಂ.ಅಧ್ಯಕ್ಷ ಜಯಾನಂದ ಗೌಡ ಟಿ., ಸದಸ್ಯ ಜಗದೀಶ್ ಡಿ, ಲಾಯಿಲ ಗ್ರಾ.ಪಂ.ಅಧ್ಯಕ್ಷೆ ಜಯಂತಿ ಎಂ.ಕೆ., ಉಪಧ್ಯಾಕ್ಷೆ ಸುಗಂಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್.ಪೂಜಾರಿ ಹಾಗೂ ರಕ್ಷಿತ್ ಶಿವಾರಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ಎನ್. ನಾಯಕ, ಡಿಹೆಚ್‌ಓ, ತಾ.ಪಂ. ಇಓ ಭವಾನಿಶಂಕರ್ ಎನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!