September 6, 2026
ಅಭಿನಂದನೆಚಿತ್ರ ವರದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಅ.12 ರಂದು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸುಮಂತ್ ಕುಮಾರ್ ಮಾತನಾಡಿ ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.ನಮ್ಮ ಕಾಲೇಜಿನಲ್ಲಿ ಕಲಿತು ಹೋದ ಮಕ್ಕಳು ಇಂದು ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ,ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ನಮ್ಮ ಮಕ್ಕಳು ದೇಶಕ್ಕೆ ಆಸ್ತಿಯಾಗಬೇಕು. ಹೆತ್ತವರಿಗೆ ಒಳ್ಳೆಯ ಮಗನಾಗಬೇಕು. ಹಾಗಾಗಿ ನಮ್ಮಲ್ಲಿ ಸಂಸ್ಕಾರಭರಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದೇವೆ.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ಮನೋಹರ್ ಬಳಂಜ,ದಿನೇಶ್ ಪೂಜಾರಿ ಅಂತರ,ಯತೀಶ್ ವೈ ಎಲ್ ಬಳಂಜ, ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರವೀಣ್ ಡಿ ಕೋಟ್ಯಾನ್,ಯೋಗೀಶ್ ಕೊಂಗುಳ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
error: Content is protected !!